ಶಿವಮೊಗ್ಗ: ‘ಈಚೆಗೆ ರಾಜಕಾರಣಿಗಳು ನಾಲಿಗೆಗೆ ಹಿಡಿತವಿಲ್ಲದೇ ಮಾತನಾಡುತ್ತಾರೆ. ನಂತರ ಅವರು ಆಡಿದ ಮಾತುಗಳ ಬಗ್ಗೆ ಯೋಚಿಸುತ್ತಾರೆ. ಹಾಗೆಯೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಈಚೆಗೆ ನಾಲಿಗೆ ಹರಿಬಿಟ್ಟು ಮಾತನಾಡಿದ್ದರು’ ಎಂದು ತರಳಬಾಳು ಶಾಖಾ ಮಠದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.