‘ಯಾವುದೋ ಕಾರಣಕ್ಕೆ ಎರಡು ದಿನ ಬೇರೆ ಕಡೆ ಹೋಗಿದ್ದೆ. ಆದರೆ, ಕೆಲವರು ನಾಪತ್ತೆಯಾಗಿದ್ದಾರೆ ಎಂದು ವದಂತಿ ಹಬ್ಬಿಸಿದ್ದರು. ಈಗ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು, ಹಿರಿಯ ಮುಖಂಡರು ನನ್ನ ಜತೆ ಚರ್ಚಿಸಿದ್ದಾರೆ. ಸತತ ಮೂರು ಬಾರಿ ಆಯ್ಕೆಯಾಗಿರುವ ನನಗೆ ಹಿರಿತನ ನೋಡಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ’ ಎಂದು ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.