ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಆಶ್ರಯದಲ್ಲಿ ಮಂಗಳವಾರ (ಮೇ 29) ಗ್ರೀನ್ ವಿಕೆಟ್ ಕಾರ್ಯಾಗಾರ ಆಯೋಜಿಸಿದೆ.
ಪರಿಸರಸ್ನೇಹಿ ಕ್ರಿಕೆಟ್ ಕ್ರೀಡಾಂಗಣಗಳ ನಿರ್ಮಾಣದ ಕುರಿತ ವಿಚಾರ ವಿನಿಮಯವು ಈ ಕಾರ್ಯಾಗಾರದಲ್ಲಿ ನಡೆಯಲಿದೆ. ದೇಶದ 40 ಕ್ರಿಕೆಟ್ ಸಂಸ್ಥೆಗಳು ಇದರಲ್ಲಿ ಭಾಗವಹಿಸಲಿವೆ.
‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿದ್ಯುತ್ ಸ್ವಾವಲಂಬನೆಗಾಗಿ ಸೋಲಾರ್ ವ್ಯವಸ್ಥೆ, ಮಳೆನೀರು ಸಂಗ್ರಹ ವ್ಯವಸ್ಥೆ, ತ್ಯಾಜ್ಯ ನಿರ್ವಹಣೆ ಮತ್ತು ಸಬ್ ಏರ್ ಸಿಸ್ಟಂಗಳನ್ನು ಅಭಿವೃದ್ಧಿ ಪಡಿಸಲಾಗಿದೆ.’ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ಹೇಳಿದ್ದಾರೆ.