ನಗರದಲ್ಲಿ ಒಂದೇ ಮಳೆಗೆ ರಸ್ತೆ ಕಿತ್ತು ಹೋದ ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರ ಬಿಲ್ ತಡೆಹಿಡಿಯಬೇಕು. ರಸ್ತೆಗಳ ಗುಣಮಟ್ಟವನ್ನು ಪ್ರಮಾಣೀಕರಿಸಿದ ಮೂರನೇ ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಸಬೇಕು. ಗುಣಮಟ್ಟ ಪರಿಶೀಲನೆಯಲ್ಲಿ ಲೋಪ ಅಥವಾ ರಾಜಿ ಮಾಡಿಕೊಂಡ ಪರಿಣಾಮ ಹೀಗಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.