ತಾಲ್ಲೂಕಿನ ಬಸಾಪುರ ಗ್ರಾಮದ ಬಳಿ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.‘ರೈತರು ಖಾಸಗಿ ವ್ಯಕ್ತಿಗಳಿಂದ ಬೀಜ ಖರೀದಿಸಬಾರದು. ರಾಣೆಬೆನ್ನೂರು, ಹಾವೇರಿ ಕಡೆ ಈರುಳ್ಳಿ, ಮೆಕ್ಕೆಜೋಳದ ಬಿಡಿ ಬೀಜಗಳನ್ನು ಮಾರಾಟ ಮಾಡುತ್ತಾರೆ ಎಂಬ ಮಾಹಿತಿ ಇದೆ. ಗುಣಮಟ್ಟ ಖಾತರಿ ಇಲ್ಲದ ಇಂತಹ ಬೀಜಗಳನ್ನು ಬಿತ್ತನೆ ಮಾಡುವುದರಿಂದ ಇಳುವರಿ ಕಡಿಮೆ ಆಗುತ್ತದೆ. ಕಳಪೆ ಬೀಜ ಬಿತ್ತನೆ ಮಾಡಿ ಬೆಳೆ ನಾಶವಾದರೆ ಕೃಷಿ ಇಲಾಖೆ ಜವಾಬ್ದಾರಿ ಆಗುವುದಿಲ್ಲ. ಕಳಪೆ ಬೀಜದ ಬಗ್ಗೆ ಈಗಾಗಲೇ ರೈತರಿಗೆ ಜಾಗೃತಿ ಮೂಡಿಸಲಾಗಿದೆ. ಇಲಾಖೆಯಿಂದ ಪ್ರಮಾಣೀಕರಿಸಿದ ಬೀಜಗಳನ್ನೇ ಖರೀದಿಸಿ ಬಿತ್ತನೆ ಮಾಡಬೇಕು’ ಎಂದು ಕಿವಿಮಾತು ಹೇಳಿದರು.