ಜಿಲ್ಲೆಯ ಶೃಂಗೇರಿ, ಕೊಪ್ಪ, ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಶೇ 190ರಷ್ಟು ಹೆಚ್ಚು ಮಳೆಯಾಗಿದೆ. ಈವರೆಗೆ ಬೆಳೆ ಹಾನಿ ಒಳಗೊಂಡಂತೆ ಯಾವುದೇ ನಷ್ಟ ಸಂಭವಿಸಿಲ್ಲ. ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ, ಮೇವು ದಾಸ್ತಾನು ಇದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಅವುಗಳನ್ನು ರೈತರು ಪಡೆಯಬಹುದು ಎಂದು ತಿಳಿಸಿದರು.