ಸೋಮವಾರ ಮಹಾನಗರ ಪಾಲಿಕೆಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ, 'ಮುಂಗಾರು ಮಳೆ ಆರಂಭವಾಗಿದೆ. ಬಿರುಸಿನ ಗಾಳಿ ಸಹಿತ ಬೀಳುತ್ತಿರುವ ಮಳೆ ಆತಂಕಕಾರಿಯಾಗದಂತೆ ನೋಡಿಕೊಳ್ಳಬೇಕಾದ ಅಗತ್ಯ ಇದೆ. ಜನರಿಗೆ ಪ್ರಾಣಾಪಾಯವಾಗದಂತೆ, ರಸ್ತೆಗಳಲ್ಲಿ ಗುಂಡಿ ಬೀಳದಂತೆ ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಗಮನಹರಿಸಿ’ ಎಂದರು.