ಸ್ವಯಂ ಸೇವಕರಾದ ಶ್ರುತಿ, ಅಶೋಕಕುಮಾರ ಮತ್ತು ದೀಪಾ ಕ್ರಾಂತಿವೀರ ಈಚೆಗೆ ಆಸ್ಪತ್ರೆಗೆ ಭೇಟಿ ನೀಡಿದಾಗ ವಾರ್ಡ್ 3ರಲ್ಲಿ ಮೂವರು ವೃದ್ಧರು ಅನಾಥ ಸ್ಥಿತಿಯಲ್ಲಿ ಇರುವುದು ಕಂಡು ಬಂದಿತು. ಅವರನ್ನು ವಿಚಾರಿಸಿದಾಗ ಅವರು ಕೊಟ್ಟ ವಿಳಾಸ ಅಸ್ತಿತ್ವದಲ್ಲಿ ಇಲ್ಲದಿರುವುದು ಗಮನಕ್ಕೆ ಬಂದಿತು. ನ್ಯಾಯಾಧೀಶರು ಅಧಿಕಾರಿಗಳನ್ನು ಕರೆಸಿ ಮಾಹಿತಿ ನೀಡಿದರು. ನಂತರ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನದ ಮದರ್ ತೆರೆಸಾ ವೃದ್ಧಾಶ್ರಮಕ್ಕೆ ಕಳಿಸಿಕೊಡಲಾಯಿತು.