ಚೇಳೂರು: ಇತ್ತೀಚೆಗೆ ಸುರಿದ ಗಾಳಿ ಮಳೆಗೆ ಇಲ್ಲಿ ಸಮೀಪದ ಹೊಸಹುಡ್ಯ ಗ್ರಾಮದ ಚೌಡಮ್ಮ ಅವರ ಮನೆ ಚಾವಣಿ ಹಾರಿ ಹೋಗಿ ಸುಮಾರು ₹ 1.5 ಲಕ್ಷ ಮೌಲ್ಯದ ಸಾಮಗ್ರಿಗಳು ಹಾಳಾಗಿವೆ.
ಗ್ರಾಮದ ಚೌಡಮ್ಮ ಅವರ ಮನೆಯ ಚಾವಣಿ ಹಾರಿವೆ. ಮನೆಯಲ್ಲಿದ್ದ ದವಸ ಧಾನ್ಯ, ವಸ್ತ್ರ ಹಾಗೂ ಇನ್ನಿತರ ಸಾಮಗ್ರಿಗಳು ಹಾಳಾಗಿವೆ. ಕಂದಾಯ ಅಧಿಕಾರಿ ಜಯಪ್ರಕಾಶ್, ವೈ.ವೆಂಕಟೇಶ್, ಗ್ರಾಮ ಪಂಚಾಯ್ತಿ ಅಧಿಕಾರಿ ಹರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆ ಹಾನಿಯಿಂದ ನಷ್ಟ ಅನುಭವಿಸುತ್ತಿರುವ ಸಂತ್ರಸ್ತೆ ಚೌಡಮ್ಮ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮದ ಹಿರಿಯರಾದ ಎಚ್.ವಿ.ನಾರಾಯಣಸ್ವಾಮಿ, ಪಿ.ವಿ.ಮದ್ದಿರೆಡ್ಡಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.