ನಾಗಪುರ: ನಗರದಲ್ಲಿ ಇಂದು ಸಂಜೆ ನಡೆಯಲಿರುವ ಕಾರ್ಯಕ್ರಮವೊಂದು ಇಡೀ ದೇಶದ ಗಮನ ಸೆಳೆದಿದೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣ ಹೇಗಿರಬಹುದು ಎಂಬ ಚರ್ಚೆಗಳ ಜೊತೆಜೊತೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುತ್ಸದಿಯ ನಿರ್ಧಾರದ ಪರ–ವಿರುದ್ಧ ಚರ್ಚೆಗಳೂ ಕಾವೇರಿವೆ.