ಕ್ಷೇತ್ರದಲ್ಲಿನ ನಿರ್ಗತಿಕರ ಆರ್ಥಿಕ ಸ್ವಾವಲಂಬನೆಗೆ ಸರ್ಕಾರ ನೀಡುವಂಥ ಯೋಜನೆ ತಲುಪಬೇಕಾದ್ದು, ಶಾಸಕರ ಕರ್ತವ್ಯ. ಆದರೆ, ಅದನ್ನು ಅವರು ಮಾಡುತ್ತಿಲ್ಲ. ಆದ್ದರಿಂದ ಈ ಹಿಂದೆ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಖುದ್ದು ಪರಿಶೀಲಿಸಬೇಕು ಎಂದು ಒತ್ತಾಯಿಸಿದ ತಿಪ್ಪೇಶ್, ಈ ವಿಚಾರವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್, ಸಮಾಜ ಕಲ್ಯಾಣ ಸಚಿವರ ಗಮನಕ್ಕೆ ತರಲಾಗಿದೆ ಎಂದರು.