ಕರ್ನಾಟಕ ರಾಜ್ಯ ಬೀದಿ ನಾಟಕ ಸಂಘಗಳ ಒಕ್ಕೂಟದ ಅಧ್ಯಕ್ಷ ಗ್ಯಾರಂಟಿ ರಾಮಣ್ಣ ಮಾತನಾಡಿ, ಸರ್ಕಾರದ ಜಾಗೃತಿ ಕಾರ್ಯಕ್ರಮಗಳನ್ನು ಒಕ್ಕೂಟಕ್ಕೆ ನೀಡಿದರೆ ಒಳಿತು. ರಾಜ್ಯದಲ್ಲಿ ನೋಂದಾಯಿತವಾಗಿರುವ ಎಲ್ಲ ಸಂಘಗಳಿಗೆ ಈ ಕಾರ್ಯಕ್ರಮಗಳನ್ನು ಸಮಾನವಾಗಿ ಹಂಚಬೇಕು. ಮುಂದಿನ ತಿಂಗಳು ಮೈಸೂರಿನಲ್ಲಿ ನಡೆಯುವ ಬೀದಿ ನಾಟಕ ಕಲಾವಿದರ ರಾಜ್ಯ ಮಟ್ಟದ ಸಮಾವೇಶದಲ್ಲಿ ಈ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗುವುದು’ ಎಂದು ನುಡಿದರು.