ಜಮೀನಿನಲ್ಲಿ ಬರುವ ಸಲ್ಪ ನೀರಿನಲ್ಲೇ ಹನಿ ನೀರಾವರಿ ವ್ಯವಸ್ಥೆ ಮಾಡಿಕೊಂಡು ಬೆಳೆ ಬೆಳೆಯುತ್ತಿದ್ದೆವು, ಆದರೆ ಮೇಲಿಂದ ಮೇಲೆ ವನ್ಯಪ್ರಾಣಿಗಳು ಜಮೀನುಗಳಿಗೆ ನುಗ್ಗಿ ಫಸಲನ್ನು ತಿಂದು ಹಾಳುಗೆಡುವುದರ ಜತೆಗೆ ಪರಿಕರಗಳನ್ನು ತುಳಿದು ನಾಶಗೊಳಿಸುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ ಒಂದೆರಡು ಸಾರಿ ಬಂದು ಹೋಗುತ್ತಾರೆ. ಆದರೆ ವನ್ಯಪ್ರಾಣಿಗಳ ಹಾವಳಿ ಮಾತ್ರ ತಪ್ಪಿಲ್ಲ
ಎಂಬುದು ಇಲ್ಲಿನ ರೈತರ ಆರೋಪ.