ಬೆಳಿಗ್ಗೆ 11 ಗಂಟೆಗೆ ಪ್ರಾರಂಭಗೊಂಡ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಪ್ರಗತಿಯ ಕುರಿತು ಸ್ಪಷ್ಟ ಪಡಿಸಲು ಮುಂದಾಗುತ್ತಿದಂತೆ ಆಕ್ರೋಶಗೊಂಡ ಸದಸ್ಯ ಮೌನೇಶ ಕಮ್ಮಾರ, ‘ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಿ ತಾಲ್ಲೂಕು ಪಂಚಾಯ್ತಿ ಅನುಮೋದನೆ ನೀಡಿದ್ದರೂ ಸರಿಯಾಗಿ ಬಳಸಿಕೊಂಡಿಲ್ಲ. ಸರ್ಕಾರ
ದಿಂದ ಹಣ ಮರಳಿ ಹೋಗುವಂತೆ ಮಾಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ತೋರುತ್ತದೆ’ ಎಂದರು.