‘ಮಳೆ ಬಂದಾಗಲೆಲ್ಲಾ ಶಾಲಾ ಆವರಣ ಕೆರೆಯಾಗಿ ಮಾರ್ಪಡುತ್ತದೆ. ಸುಮಾರು ವರ್ಷಗಳಿಂದಲೂ ಈ ಸಮಸ್ಯೆ ಹಾಗೆಯೇ ಇದೆ. ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ನೀರು ನಿಂತಾಗ ಭೇಟಿ ನೀಡುವ ಅಧಿಕಾರಿಗಳು ಕೂಡಲೇ ಬಗೆಹರಿಸುವುದಾಗಿ ಹೇಳಿ ಹೋಗುವುದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ, ಇದರಿಂದಾಗಿ ಈ ಶಾಲೆಯ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ’ ಎಂದು ಗ್ರಾಮದ ಮುಖಂಡ ಶರಣಯ್ಯ ಮುಳ್ಳೂರಮಠ ದೂರಿದರು.