ಪಾಂಡವಪುರದ ಏಳು ವರ್ಷದ ಲೋಹಿತ್ ಮುಖ್ಯಪಾತ್ರದಲ್ಲಿ ನಟಿಸಿದ್ದಾನೆ. ಈ ಚಿತ್ರದಲ್ಲಿ ಮುಗ್ಧತೆಯೇ ಪ್ರಧಾನವಸ್ತು ಎಂದು ಸತ್ಯಪ್ರಕಾಶ್ ಹೇಳಿಕೊಂಡಿದ್ದಾರೆ. ಚಿತ್ರೀಕರಣ ಮುಗಿದಿದ್ದು, ಈಗ ರೀ ರೆಕಾರ್ಡಿಂಗ್ ಹಂತದಲ್ಲಿದೆ. ಆಗಸ್ಟ್ ತಿಂಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ನಡೆದಿದ್ದು, 37 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಈ ಸಿನಿಮಾದಲ್ಲಿ ಮಂಗಳೂರು, ರಾಯಚೂರು, ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳ ರಂಗಭೂಮಿ ಕಲಾವಿದರು ನಟಿಸಿದ್ದಾರೆ. ಮುಖ್ಯಪಾತ್ರಗಳಲ್ಲಿ ಎಂ.ಕೆ.ಮಠ, ಸಾಯಿಕೃಷ್ಣ ಕುಡ್ಲ, ನಾಗಭೂಷಣ್ ಹಾಗೂ ಇನ್ನಿತರರು ನಟಿಸಿದ್ದಾರೆ. ಕಲಾವಿದರದು ಸಂಪೂರ್ಣ ಹೊಸ ತಂಡ. ಆದರೆ ತಾಂತ್ರಿಕ ವಿಭಾಗದಲ್ಲಿ ‘ರಾಮಾ ರಾಮಾ ರೇ’ ಚಿತ್ರಕ್ಕೆ ಕೆಲಸ ಮಾಡಿದ ತಂಡವೇ ಇದೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ, ಲವಿತ್ ಛಾಯಾಗ್ರಹಣ, ವರದರಾಜ ಕಾಮತ್ ಕಲಾನಿರ್ದೇಶನ ಈ ಚಿತ್ರಕ್ಕಿದೆ.