ಬಡ್ತಿಯಲ್ಲೂ ಪರಿಶಿಷ್ಟ ಜಾತಿ, ವರ್ಗದವರಿಗೆ ಮೀಸಲಾತಿ ನೀಡಲು 1978ರಲ್ಲಿ ಕಾನೂನು ರೂಪಿಸಲಾಗಿತ್ತು. ಈ ನೀತಿ ಕೆಳಹಂತದ ನೌಕರರಿಂದ ಉನ್ನಾಧಿಕಾರಿಗಳವರೆಗೂ ಅನ್ವಯಿಸಲಾಗಿತ್ತು. ಇದರಿಂದ ಪರಿಶಿಷ್ಟ ಜಾತಿ, ವರ್ಗದವರಿಗೆ ಮಾತ್ರ ಬಡ್ತಿ ಸಿಕದೆ. ಉಳಿದ ಶೇ 82ರಷ್ಟು ವರ್ಗದವರಿಗೆ ಅನ್ಯಾಯವಾಗುತ್ತಾ ಬಂದಿದೆ. ಹಲವು ಬಾರಿ ನ್ಯಾಯಾಂಗ ಹೋರಾಟ ನಡೆಸಲಾಗಿದೆ. ರಾಜ್ಯ ಸರ್ಕಾರ ಸುಪ್ರಿಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಅಂತಿಮ ಆದೇಶದ ಪ್ರಕಾರ ಬಡ್ತಿಯಲ್ಲಿ ಮೀಸಲಾತಿ ನೀಡಬಾರದು ಎಂದು ಹೇಳಿದೆ. ಜತೆಗೆ, ವೇಗೋತ್ಕರ್ಷ ಜೇಷ್ಠತೆ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಈ ಆದೇಶ 6 ತಿಂಗಳ ಒಳಗೆ ಜಾರಿ ಮಾಡುವಂತೆ ಸೂಚಿಸಿದೆ. ಆದರೂ, ಆದೇಶ ನಿಗದಿತ ಅವಧಿಯಲ್ಲಿ ಜಾರಿ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.