ಜಾಥಾ, ನಗರದ ಗಾಂಧಿ ಮೈದಾನದಿಂದ ಆರಂಭಗೊಂಡು ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಕಾಲೇಜು ರಸ್ತೆ, ಕೊಹಿನೂರು ರಸ್ತೆ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಜೂನಿಯರ್ ಕಾಲೇಜು ರಸ್ತೆ ಮೂಲಕ ಓಂಕಾರೇಶ್ವರ ದೇವಸ್ಥಾನದ ಬಳಿ ಲಕ್ಷ್ಮಿ ನರಸಿಂಹಕಲ್ಯಾಣ ಮಂಟಪದ ಬಳಿ ಕೊನೆಗೊಂಡಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಚ್. ರಾಮಚಂದ್ರ, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಜಗದೀಶ್, ಯೋಗ ತರಬೇತುದಾರ ರಮೇಶ್ ಕುಮಾರ್ ಹಾಜರಿದ್ದರು.