ನವದೆಹಲಿ (ಪಿಟಿಐ): ಈಗ ಅಂಚೆ ಕಚೇರಿಗಳಲ್ಲಿ ಮಾತ್ರ ಲಭ್ಯವಿರುವ ಸಣ್ಣ ಉಳಿತಾಯ ಯೋಜನೆಗಳನ್ನು ಇನ್ನುಮುಂದೆ ಬ್ಯಾಂಕ್ಗಳಿಗೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಲ್ಲದೆ, ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಆ್ಯಕ್ಸಿಸ್ ಬ್ಯಾಂಕ್ಗಳೂ ಸಹ ರಾಷ್ಟ್ರೀಯ ಉಳಿತಾಯ ಯೋಜನೆ (ಎನ್ಎಸ್ಇ), ಆರ್.ಡಿ ಮತ್ತು ತಿಂಗಳ ಉಳಿತಾಯ ಉಳಿತಾಯ ಯೋಜನೆಗಳಡಿ ಠೇವಣಿ ಸಂಗ್ರಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸಣ್ಣ ಉಳಿತಾಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದೆ.
ಸದ್ಯ ಬ್ಯಾಂಕ್ಗಳಲ್ಲಿ ಪಿಪಿಎಫ್, ಕಿಸಾನ್ ವಿಕಾಸ ಪತ್ರ, ಸುಕನ್ಯಾ ಸಮೃದ್ಧಿ ಖಾತೆ ಮತ್ತು ಹಿರಿಯ ನಾಗರಿಕರ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಅವಕಾಶ ಇದೆ.