ರಾಳೇಗಣಸಿದ್ಧಿ (ಮಹಾರಾಷ್ಟ್ರ): ಲೋಕಪಾಲರ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದರಿಂದ ಉದ್ದೇಶಿತ ಉಪವಾಸ ಸತ್ಯಾಗ್ರಹವನ್ನು ಅಣ್ಣಾಹಜಾರೆ ಮುಂದೂಡಿದ್ದಾರೆ.
ತಮ್ಮ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಹಜಾರೆ ಅವರು ಮಹಾತ್ಮ ಗಾಂಧಿ ಪುಣ್ಯತಿಥಿ ದಿನವಾದ ಜನವರಿ 30ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದರು.