ಪೊಲೀಸರು ರಾಜಭವನದ ಸಿಬ್ಬಂದಿಯನ್ನು ಪ್ರಶ್ನಿಸಲಿದ್ದಾರೆ ಮತ್ತು ತನಿಖಾ ತಂಡವು ರಾಜಭವನದಿಂದ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯಪಾಲರಿಗೆ ಇರುವ ವಿನಾಯಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಪೊಲೀಸರು ವಿಚಾರಣೆ ನಡೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸಬಹುದೇ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.