ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ ಸರ್ಕಾರ ರಾಮರಾಜ್ಯದ ಆದರ್ಶಗಳಿಂದ ಪ್ರೇರಿತವಾಗಿದೆ: ಅರವಿಂದ ಕೇಜ್ರಿವಾಲ್‌

Published 4 ಮಾರ್ಚ್ 2024, 12:28 IST
Last Updated 4 ಮಾರ್ಚ್ 2024, 12:28 IST
ಅಕ್ಷರ ಗಾತ್ರ

ನವೆದೆಹಲಿ: ದೆಹಲಿ ಸರ್ಕಾರದ 2024–25ನೇ ಸಾಲಿನ ಬಜೆಟ್‌ ಪ್ರತಿಯೊಂದು ಕ್ಷೇತ್ರದ ಮೇಲೂ ಕಾಳಜಿ ವಹಿಸಿದೆ. ಎಎಪಿ ಸರ್ಕಾರ ರಾಮರಾಜ್ಯದ ಆದರ್ಶಗಳಿಂದ ಪ್ರೇರಿತವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಮಹಿಳಾ ಸಮ್ಮಾನ್’ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೂ ಮಾಸಿಕ ₹1 ಸಾವಿರ ನೀಡುವ ಘೋಷಣೆಯು ಬಹುಶಃ ಪ್ರಪಂಚದಲ್ಲಿ ಮಹಿಳಾ ಸಬಲೀಕರಣಕ್ಕೆ ತೆಗೆದುಕೊಂಡಿರುವ ಬಹುದೊಡ್ಡ ಕ್ರಮವಾಗಿದೆ’ ಎಂದು ಅವರು ಹೇಳಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ, ರಾಜ್ಯ ಸರ್ಕಾರದ ಹಣಕಾಸು ಸಚಿವೆ ಅತಿಶಿ ಅವರು ತಮ್ಮ 10ನೇ ಬಜೆಟ್‌ ಮಂಡಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್‌, ‘ಇದು ಉತ್ತಮ ಬಜೆಟ್‌ ಆಗಿದ್ದು, ಪ್ರತಿಯೊಂದು ವಿಭಾಗದ ಜನರು ಹಾಗೂ ಕ್ಷೇತ್ರಗಳನ್ನು ಪರಿಗಣಿಸಿದೆ’ ಎಂದು ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಮಹಿಳಾ ಸಮ್ಮಾನ್’ ಯೋಜನೆಯು ಬಹುಶಃ ಮಹಿಳೆಯರ ಸಬಲೀಕರಣಕ್ಕಾಗಿ ಕೈಗೊಂಡ ವಿಶ್ವದ ಬಹುದೊಡ್ಡ ಕಾರ್ಯಕ್ರಮವಾಗಿದೆ. ಈ ಯೋಜನೆಯು ಭಾರಿ ಮೊತ್ತವನ್ನು ಒಳಗೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ಈ ಯೋಜನೆಯಡಿ ದೆಹಲಿಯ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೂ ಮಾಸಿಕ ₹1 ಸಾವಿರ ನೀಡಲಾಗುತ್ತದೆ.

‘ದೆಹಲಿಯಲ್ಲಿ ಸುಮಾರು 67 ಲಕ್ಷ ಮಹಿಳಾ ಮತದಾರರಿದ್ದಾರೆ. ಈ ಯೋಜನೆಯು ದೆಹಲಿಯ ಸುಮಾರು 45 ರಿಂದ 50 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಆದಾಯ ತೆರಿಗೆ ಪಾವತಿಸುವ ಮಹಿಳೆಯರು ಮತ್ತು ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿರುವ ಮಹಿಳೆಯರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

2024–25ನೇ ಸಾಲಿನ ಹಣಕಾಸು ವರ್ಷದಲ್ಲಿ ದೆಹಲಿ ಸರ್ಕಾರವು ₹ 76 ಸಾವಿರ ಕೋಟಿ ಮೊತ್ತದ ಬಜೆಟ್‌ ಮಂಡಿಸಿದೆ. ಕಳೆದ ವರ್ಷ ₹78,800 ಕೋಟಿ ಮೊತ್ತದ ಬಜೆಟ್‌ ಮಂಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT