ಘಟನೆ ಖಂಡಿಸಿ ಟ್ವೀಟ್ ಮಾಡಿರುವ ಅವರು, ‘ಚಂಡೀಗಡ ವಿಶ್ವವಿದ್ಯಾನಿಲಯದಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ಕೇಳಿ ಬೇಸರವಾಗಿದೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ವದಂತಿಗಳಿಗೆ ಕಿವಿ ಕೊಡದಂತೆ ಎಲ್ಲರಿಗೂ ಮನವಿ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.
ಪ್ರಕರಣವನ್ನು ಖಂಡಿಸಿ ಪಂಜಾಬ್ನ ಮೊಹಾಲಿಯಲ್ಲಿ ಖಾಸಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.