ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಿಸಿದ ಕಾಂಗ್ರೆಸ್

Published 5 ಮೇ 2024, 10:15 IST
Last Updated 5 ಮೇ 2024, 10:15 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಬದಲಾಯಿಸಿದ್ದು, ನೀಲಗಿರಿ ವಿಧಾನಸಭಾ ಕ್ಷೇತ್ರದಿಂದ ಅಕ್ಷಯ ಆಚಾರ್ಯ ಅವರನ್ನು ಕಣಕ್ಕಿಳಿಸಿದೆ.

ದೇಬಾಶಿಶ್ ನಾಯಕ್, ಕಾಂಗ್ರೆಸ್ ವಕ್ತಾರ ಸುದರ್ಶನ್ ದಾಸ್, ಹಿಮಾಂಶು ಚೌಲಿಯಾ, ಸುದರ್ಶನ್ ಸಾಹೂ ಅವರನ್ನು ಹೊಸದಾಗಿ ಕಣಕ್ಕೆ ಇಳಿಸಲಾಗಿದೆ. ಈ ಹಿಂದೆ ಐವರಿಗೆ ನೀಡಿದ್ದ ಪಕ್ಷದ ಬಿ.ಪಾರಂ ಅನ್ನು ವಾಪಸ್‌ ಪಡೆಯಲಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಒಡಿಶಾದ 147 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 145 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಉಳಿದ 2 ಸ್ಥಾನಗಳನ್ನು ಜೆಎಂಎಂ ಮತ್ತು ಸಿಪಿಐ(ಎಂ)ಗೆ ಬಿಟ್ಟುಕೊಟ್ಟಿದೆ.

ಮೇ 13ರಿಂದ ಜೂನ್ 1ರವರೆಗೆ ನಾಲ್ಕು ಹಂತಗಳಲ್ಲಿ ಒಡಿಶಾದಲ್ಲಿ ಏಕಕಾಲದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT