ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ ಮುಖಂಡ ಸಿಸೋಡಿಯಾ ಜಾಮೀನು ಅರ್ಜಿ ವಜಾ

Published 30 ಏಪ್ರಿಲ್ 2024, 15:35 IST
Last Updated 30 ಏಪ್ರಿಲ್ 2024, 15:35 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿಯ ಕೋರ್ಟ್ ಮಂಗಳವಾರ ವಜಾ ಮಾಡಿತು.

ಜಾಮೀನು ಮಂಜೂರು ಮಾಡಲು ಸಂದರ್ಭ ಸೂಕ್ತವಾಗಿಲ್ಲ ಎಂದು ಅರ್ಜಿ ವಜಾ ಮಾಡಿದ ಸಿಬಿಐ ಮತ್ತು ಇ.ಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ತಿಳಿಸಿದರು.

ಅಬಕಾರಿ ನೀತಿ ಕುರಿತ ಹಣ ಅಕ್ರಮ ವರ್ಗಾವಣೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ. ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ) ಪರ ವಕೀಲರು ಹಾಗೂ ಸಿಸೋಡಿಯಾ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ಈ ಕುರಿತ ಆದೇಶವನ್ನು ಕಾಯ್ದಿರಿಸಿದರು.

ಹಗರಣದಲ್ಲಿ ಸಿಸೋಡಿಯಾ ಪಾತ್ರವಿದೆ ಎಂಬ ಆರೋಪದಡಿ ಸಿಬಿಐ 2023ರ ಫೆಬ್ರುವರಿ 26ರಂದು ಬಂಧಿಸಿದ್ದೆ, ಹಣ ಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ಇ.ಡಿ ಮಾರ್ಚ್ 9, 23ರಂದು ಬಂಧಿಸಿತ್ತು.

ಬಂಧನದ ಹಿಂದೆಯೇ ಸಿಸೋಡಿಯಾ ಅವರು ದೆಹಲಿಯ ಸಚಿವ ಸಂಪುಟಕ್ಕೆ 2023ರ ಫೆಬ್ರುವರಿ 28ರಂದು ರಾಜೀನಾಮೆಯನ್ನು ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT