ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಜಾಮೀನು ಪ್ರಶ್ನಿಸಿ ಅರ್ಜಿ; ಆರೋಪಿಗೆ ನೋಟಿಸ್

Published 15 ಜನವರಿ 2024, 21:02 IST
Last Updated 15 ಜನವರಿ 2024, 21:02 IST
ಅಕ್ಷರ ಗಾತ್ರ

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ, ಆರೋಪಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಹೈಕೋರ್ಟ್‌ ಆದೇಶ ಪ್ರಶ್ನಿಸಿ, ಗೌರಿ ತಂಗಿ ಕವಿತಾ ಲಂಕೇಶ್‌ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌ ಮತ್ತು ಸತೀಶ್ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ, ಆರೋಪಿ ಮೋಹನ್‌ ನಾಯಕ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಕರ್ನಾಟಕ ಹೈಕೋರ್ಟ್‌, ಆರೋಪಿಗೆ ಕಳೆದ ಡಿಸೆಂಬರ್‌ 7ರಂದು ಜಾಮೀನು ನೀಡಿ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT