ಬೆಳಿಗ್ಗೆಯಿಂದ ಕೊಟ್ಟಾಯಂ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ. ಆದರೆ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.ನಿರಂತರ ಮಳೆಯಿಂದಾಗಿ ಶನಿವಾರ ಕೇರಳದ ಕೆಲವು ಭಾಗಗಳಲ್ಲಿ ಸಣ್ಣ ಭೂಕುಸಿತಗಳು ಮತ್ತು ರೈಲು ಸೇವೆಗಳಿಗೆ ಅಡ್ಡಿಯುಂಟಾಗಿದೆ. ಗುಡ್ಡಗಾಡು ಪ್ರದೇಶಗಳು, ನದಿಯ ಬದಿಗಳು ಮತ್ತು ಪ್ರವಾಸಿ ಕೇಂದ್ರಗಳಲ್ಲಿ ತೀವ್ರ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.