ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಶಿವಸೇನೆಯ ಹಿರಿಯ ನಾಯಕ, ಸಾಮ್ನಾದ ಮಾಜಿ ಸಂಪಾದಕ ಸಂಜಯ್ ರಾವತ್, ಚುನಾವಣೆಗೆ ಮೊದಲು ಮಾಡಿಕೊಂಡಿದ್ದ ಒಪ್ಪಂದದಂತೆಯೇ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಯುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ ಚುನಾವಣೆಗೂ ಮೊದಲೇ ನಾವು ಸರ್ಕಾರದಲ್ಲಿ ಸಮಪಾಲು ಕೋರಿದ್ದೆವು. 50:50 ಸೂತ್ರದಂತೆ ಸರ್ಕಾರ ರಚನೆ ಆಗುತ್ತದೆ. ಉದ್ಧವ್ ಠಾಕ್ರೆ ಅವರನ್ನು ಬೇಟಿಯಾಗಿ ಚರ್ಚಿಸುತ್ತೇನೆ. ನಮ್ಮ ಪಕ್ಷದ ಸಾಧನೆಯು ತೆಗೆದುಹಾಕುವಂಥದ್ದಲ್ಲ ಎಂದು ಅವರು ಹೇಳಿದರು.