ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಆಡಳಿತದಲ್ಲಿ ಸ್ವಾತಂತ್ರ್ಯ ಕಳೆದುಕೊಂಡ ಮಾಧ್ಯಮಗಳು: ಪಿಣರಾಯಿ ವಿಜಯನ್‌

Published 8 ಏಪ್ರಿಲ್ 2024, 9:31 IST
Last Updated 8 ಏಪ್ರಿಲ್ 2024, 9:31 IST
ಅಕ್ಷರ ಗಾತ್ರ

ಪತ್ತಿನಂತಿಟ್ಟ(ಕೇರಳ): ಬಿಜೆಪಿಯ ಆಡಳಿತಾವಧಿಯಲ್ಲಿ ಮಾಧ್ಯಮ ಸ್ವಾತಂತ್ರ್ಯ ಸಂಪೂರ್ಣವಾಗಿ ಕಣ್ಮರೆಯಾಗಿದ್ದು, ಸಂಘಪರಿವಾರದ ವಿರುದ್ಧ ವರದಿ ಮಾಡುವ ಧೈರ್ಯ ತೋರುವ ಪತ್ರಕರ್ತರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದಕ್ಕೆ ದೇಶ ಸಾಕ್ಷಿಯಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿದ ನಂತರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಸ್ಥಾನ ನಿರಂತರವಾಗಿ ಕುಸಿಯುತ್ತಿದೆ. 2023ರ ಸೂಚ್ಯಂಕದಲ್ಲಿ ವಿಶ್ವದ 180 ದೇಶಗಳ ಪೈಕಿ ಭಾರತ 161ನೇ ಸ್ಥಾನಕ್ಕೆ ಕುಸಿದಿತ್ತು’ ಎಂದರು.

‘ಸರ್ವಾಧಿಕಾರಿ ಸರ್ಕಾರಗಳು ಮಾಧ್ಯಮಗಳನ್ನು ತನ್ನ ಮುಷ್ಠಿಯಲ್ಲಿ ಇಟ್ಟುಕೊಳ್ಳಲು ಸದಾ ಪ್ರಯತ್ನಿಸುತ್ತವೆ. ಕೇಂದ್ರ ಸರ್ಕಾರದ ಆಡಳಿತ ವೈಖರಿಯನ್ನು ಹಾಡಿ ಹೊಗಳದ ಮಾಧ್ಯಮಗಳನ್ನು ನಿರ್ದಾಕ್ಷಿಣ್ಯವಾಗಿ ಗುರಿ ಮಾಡಲಾಗುತ್ತಿದೆ’ ಎಂದರು.

‘2020ರ ದೆಹಲಿ ಗಲಭೆ ಪ್ರಕರಣವನ್ನು ಪ್ರಸಾರ ಮಾಡಿದ್ದಕ್ಕಾಗಿ ಕೇರಳದ ಎರಡು ಸುದ್ದಿವಾಹಿನಿಗಳ ಪರವಾನಗಿಯನ್ನು ರದ್ದುಗೊಳಿಸಲಾಯಿತು. ಆದಾಯ ಇಲಾಖೆಯ ಕಿರುಕುಳಕ್ಕೆ ಬೇಸತ್ತ ಬ್ರಿಟನ್ ಮೂಲದ ಸುದ್ದಿಸಂಸ್ಥೆ ಬಿಬಿಸಿ ಭಾರತದಲ್ಲಿನ ತನ್ನ ಕಚೇರಿಗೆ ಬೀಗ ಹಾಕಬೇಕಾಯಿತು’ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT