ಟಿಎಂಸಿ ಅಭ್ಯರ್ಥಿ ಅಸಿತ್ ಪಾಲ್ ಪರ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯದ ಜನರಿಗೆ ಆವಾಸ್ ಯೋಜನೆಯಡಿ ಹಣ ಬಿಡುಗಡೆ ಮಾಡದಿರಲು ಕೇಂದ್ರ ಸರ್ಕಾರ ಪಿತೂರಿ ನಡೆಸಿದೆ. ಪ್ರಧಾನಿ ಮೋದಿ ಅವರು ಉಪನ್ಯಾಸಗಳನ್ನು ನೀಡುವ ಬದಲು, ಯೋಜನೆಗಾಗಿ ಮಂಜೂರು ಮಾಡಿರುವ ಅನುದಾನದ ವಿವರ ಕುರಿತು ‘ಶ್ವೇತ ಪತ್ರ’ ಬಿಡುಗಡೆ ಮಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ’ ಎಂದು ತಿಳಿಸಿದ್ದಾರೆ.
ಆವಾಸ್ ಯೋಜನೆಗಾಗಿ ಬಿಜೆಪಿ ಸರ್ಕಾರ ಬಂಗಾಳಕ್ಕೆ ಒಂದೇ ಒಂದು ಪೈಸೆ ನೀಡಿದೆ ಎಂದು ಮೋದಿ ಅವರು ಸಾಬೀತುಪಡಿಸಿದರೆ, ಲೋಕಸಭೆ ಚುನಾವಣೆಗಾಗಿ ಪಕ್ಷದ ಅಭ್ಯರ್ಥಿಗಳು ನಡೆಸುತ್ತಿರುವ ಪ್ರಚಾರವನ್ನು ನಿಲ್ಲಿಸುವುದಾಗಿ ಅಭಿಷೇಕ್ ಹೇಳಿದ್ದಾರೆ.