ಹೈದರಾಬಾದ್: ಆಂಧ್ರ ಪ್ರದೇಶದ ತಿರುಪತಿಯಲ್ಲಿರುವ ತಿರುಮಲ ದೇವಾಲಯದ ಸಮೀಪ ಕಾಲ್ತುಳಿತದ ಪರಿಸ್ಥಿತಿ ನಿರ್ಮಾಣವಾಗಿ ಕನಿಷ್ಠ ಮೂವರು ಗಾಯಗೊಂಡಿದ್ದಾರೆ. 'ಸರ್ವದರ್ಶನ ಟಿಕೆಟ್' ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಟಿಕೆಟ್ ಕೌಂಟರ್ ಬಳಿ ಜಮಾಯಿಸಿದ್ದರಿಂದ ಈ ಘಟನೆ ಸಂಭವಿಸಿರುವುದಾಗಿ ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ.
ನೂಕಾಟ, ತಳ್ಳಾಟ ನಡೆದಿರುವುದು ಕೆಲವು ವಿಡಿಯೊಗಳಲ್ಲಿ ದಾಖಲಾಗಿದೆ. ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ಮಕ್ಕಳು ಸೇರಿದಂತೆ ನೆರೆದಿದ್ದ ಭಕ್ತಾದಿಗಳ ಅಳು, ಚೀರಾಟ ಕೇಳಿತು. ಪೊಲೀಸರು ಗುಂಪು ನಿಯಂತ್ರಿಸಲು ಮುಂದಾಗುತ್ತಿದ್ದಂತೆ ಜನರು ಆತಂಕದಲ್ಲಿ ಚೆಲ್ಲಾಪಿಲ್ಲಿಯಾಗಿ ಓಡಿದರು ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಪ್ರಸಿದ್ಧ ಯಾತ್ರಾಸ್ಥಳದಲ್ಲಿ ದುಡ್ಡು ಮಾಡುವ ಬಗೆಗೆ ಮಾತ್ರವೇ ರಾಜ್ಯ ಸರ್ಕಾರವು ಗಮನ ಕೇಂದ್ರೀಕರಿಸಿದೆ ಎಂದು ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
Andhra Pradesh | At least three people were injured in a stampede-like situation at the Tirumala shrine in Tirupati.
— ANI (@ANI) April 12, 2022
A large crowd of pilgrims gathered at the ticket counter in the shrine to secure Sarvadarshan tickets, which led to the stampede-like situation. pic.twitter.com/aXcxGcCqrL
'ತಿರುಮಲವನ್ನು ಕೇವಲ ಆದಾಯದ ಮೂಲವಾಗಿ ಮಾತ್ರವೇ ಪರಿಗಣಿಸಲಾಗುತ್ತಿದ್ದು, ಭಕ್ತಾದಿಗಳಿಗೆ ದರ್ಶನ ಮತ್ತು ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸುವುದನ್ನು ಅಲಕ್ಷಿಸಲಾಗಿದೆ. ಟಿಟಿಡಿ ಕೂಡಲೇ ಎಚ್ಚೆತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ' ಎಂದು ಚಂದ್ರಬಾಬು ನಾಯ್ದು ಹೇಳಿದ್ದಾರೆ.
Due to uncontrollable rush for Sarvadarshanam tickets at respective counters in Tirupati, TTD had decided to stop break darshan till sunday and allow the pilgrims to Tirumala to have darshan without any tickets.#tirupati #tirumala #tirupathi #itsmytirupati #tirumalahills #ttd pic.twitter.com/LzzgFN86y4
— It's My Tirupati (@Itsmytirupati) April 12, 2022
ಟಿಟಿಡಿಯ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಘಟನೆಯ ಸಂಬಂಧ ಪ್ರತಿಕ್ರಿಯಿಸಿದ್ದು, ಪೊಲೀಸರು ಪರಿಸ್ಥಿತಿಯನ್ನು ಕ್ಷಿಪ್ರಗತಿಯಲ್ಲಿ ನಿಯಂತ್ರಣಕ್ಕೆ ತಂದರು ಹಾಗೂ ಅಲ್ಲಿ ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣವಾಗಿರಲಿಲ್ಲ ಎಂದಿದ್ದಾರೆ.
'ನಿತ್ಯ ತಿರುಮಲ ದೇವಾಲಯದಲ್ಲಿ ಸುಮಾರು 80,000 ಭಕ್ತಾದಿಗಳು ದರ್ಶನ ಪಡೆಯಬಹುದಾಗಿದೆ. ಇಂದು ಅನಿರೀಕ್ಷಿತವಾಗಿ ಭಕ್ತಾದಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಹೀಗಾಗಿ, ಜನರ ಗುಂಪು ದೊಡ್ಡದಾಗಿದೆ. ಈಗ ಎಲ್ಲರನ್ನೂ ತಿರುಮಲದ ಸಾಲಿಗೆ ಕಳುಹಿಸಲಾಗಿದೆ ಹಾಗೂ ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಸುಬ್ಬಾರೆಡ್ಡಿ ತಿಳಿಸಿದ್ದಾರೆ.
'ಕೆಜಿಎಫ್ ಚಾಪ್ಟರ್ 2' ಸಿನಿಮಾ ಬಿಡುಗಡೆಗೂ ಮುನ್ನ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಲು ಅನೇಕ ದೇಗುಲಗಳಿಗೆ ಭೇಟಿ ನೀಡುತ್ತಿರುವ ನಟ ಯಶ್, ಸೋಮವಾರ ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದರು.
#KGFChapter2 star #Yash offers prays at Tirumala Today! #tirupati #tirumala #tirupathi #itsmytirupati #kgf #kgf2 #kgfchapter2 #kgfmovie #yash #yashkgf pic.twitter.com/TZ4IpKFFQ2
— It's My Tirupati (@Itsmytirupati) April 11, 2022
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.