ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ ಧರ್ಮಾ ರೆಡ್ಡಿ ಹಾಗೂ ರಾಮ ಮಂದಿರ ಟ್ರಸ್ಟ್ನ ಸಂಘಟಕರ ನಡುವೆ ಸಭೆ ನಡೆಯಿತು ಎಂದು ಟಿಟಿಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಜನಸಂದಣಿ ನಿರ್ವಹಣೆ, ಸರತಿ ಸಾಲುಗಳು, ನೀರಿನ ಸೌಲಭ್ಯ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳ ಕುರಿತು ತಾಂತ್ರಿಕ ಸಲಹೆಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಟ್ರಸ್ಟ್ಗೆ ಸಲ್ಲಿಸಲಾಯಿತು ಎಂದು ತಿಳಿಸಲಾಗಿದೆ.