ಮೇದಿನಿನಗರ: ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮತ್ತು ಜಾರ್ಖಂಡ್ ಪೊಲೀಸರು ಶನಿವಾರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಮಾವೋವಾದಿಗಳನ್ನು ಬಂಧಿಸಿದ್ದಾರೆ.
ಪ್ರತ್ಯೇಕ ಗ್ರಾಮಗಳಲ್ಲಿ ತಲೆ ಮರೆಸಿಕೊಂಡಿದ್ದ ರಾಜೇಂದ್ರ ಭುಯಾನ್ (34) ಮತ್ತು ವಿಷ್ಣು ವಿಶ್ವಕರ್ಮ (31) ಎಂಬ ನಕ್ಸಲೀಯರನ್ನು ಬಂಧಿಸಲಾಗಿದೆ. ಅವರ ಬಳಿ ಇದ್ದ ನಾಲ್ಕು ನಾಡ ಪಿಸ್ತೂಲ್ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪಲಾಮು ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ತಿಳಿಸಿದ್ದಾರೆ.