ಕೆಎಚ್. ಪಾಂಬಿ ನೇತೃತ್ವದ ಯುಎನ್ಎಲ್ಎಫ್ (ಪಿ) ಸಂಘಟನೆಯು 2023ರ ನವೆಂಬರ್ 23ರಂದು ಕೇಂದ್ರ ಸರ್ಕಾರದ ಜೊತೆ ಕದನ ವಿರಾಮದ ಒಪ್ಪಂದಕ್ಕೆ ಸಹಿ ಹಾಕಿ, ಹಿಂಸಾಚಾರದಲ್ಲಿ ತೊಡಗುವುದಿಲ್ಲ ಎಂದು ಹೇಳಿತ್ತು. ಈ ಮೂಲಕ ಸರ್ಕಾರದ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಇಂಫಾಲ್ ಕಣಿವೆಯ ಮೊದಲ ಮೈತೇಯಿ ಸಂಘಟನೆ ಎನಿಸಿಕೊಂಡಿತ್ತು. ಆದರೆ, ಈ ಸಂಘಟನೆಯು ತನ್ನ ಕೇಡರ್ಗಳು ಯಾವೆಲ್ಲಾ ಪ್ರದೇಶಗಳಲ್ಲಿದ್ದಾರೆ ಎಂಬ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ. ಜೊತೆಗೆ ತಮ್ಮ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.