ಬಿಜೆಪಿ ನಾಯಕ ವಿಜಯ್ ಮಿಶ್ರಾ ಎನ್ನುವವರು ಆರು ವರ್ಷದ ಹಿಂದೆ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ದೂರು ದಾಖಲಿಸಿದ್ದರು.
ಕಳೆದ ವರ್ಷ ಡಿಸೆಂಬರ್ನಲ್ಲಿ ಇದೇ ಪ್ರಕರಣ ಸಂಬಂಧ ರಾಹುಲ್ ಗಾಂಧಿಗೆ ಕೋರ್ಟ್ ವಾರೆಂಟ್ ಜಾರಿ ಮಾಡಿತ್ತು. ಫೆಬ್ರುವರಿ 20ರಂದು ಭಾರತ್ ಜೋಡೊ ನ್ಯಾಯ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.