ದೇವರಿಯಾ (ಉ.ಪ್ರ): ಡಿ.ಜೆ ಹಾಕುವ ಸಂಬಂಧ ಕೆಲವು ಗ್ರಾಮಸ್ಥರು ಹಾಗೂ ದೇಗುಲದ ಪೂಜಾರಿ ನಡೆದ ವಾಗ್ವಾದ ತಾರಕಕ್ಕೇರಿ, ಪೂಜಾರಿಯನ್ನು ಕೋಲುಗಳಿಂದ ಥಳಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆನುಬಾ ಚೌಬೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.