ಭಾರತೀಯ ವಾಯುಪಡೆಯ ಎಂಐ–17 ಹೆಲಿಕಾಪ್ಟರ್ ಅನ್ನು ಬೆಂಕಿ ನಂದಿಸುವ ಕಾರ್ಯಕ್ಕೆ ಬಳಸಲಾಗುತ್ತಿದೆ. ಬೆಂಕಿ ವ್ಯಾಪಿಸಿರುವ ಪೈನ್ಸ್, ಭೂಮಿಯಾಧರ್, ನಾರಾಯಣ ನಗರ, ಭವಾಲಿ, ರಾಮಗಢ ಪ್ರದೇಶಗಳಲ್ಲಿ ಹೆಲಿಕಾಪ್ಟರ್ ನೆರವಿನಿಂದ ನೀರು ಸಿಂಪಡಿಸಲಾಗುತ್ತಿದೆ. ಭೀಮ್ತಾಲ್ ಕೆರೆಯಿಂದ ಈ ನೀರನ್ನು ಹೆಲಿಕಾಪ್ಟರ್ ಸಂಗ್ರಹಿಸುತ್ತಿದೆ. ಒಂದು ಬಕೆಟ್ ಸುಮಾರು 5,000 ಲೀಟರ್ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿದೆ.