ಗುಂಟೂರು ಜಿಲ್ಲೆಯಲ್ಲಿ, ಕೃಷ್ಣಾ ನದಿಯ ದಂಡೆಯಲ್ಲಿ 33 ಸಾವಿರ ಎಕರೆ ಪ್ರದೇಶದಲ್ಲಿ ಹೊಸ ರಾಜಧಾನಿ ನಿರ್ಮಿಸುವ ಯೋಜನೆಯನ್ನು ಹಿಂದಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೈಗೆತ್ತಿಕೊಂಡಿದ್ದರು. ಆದರೆ, ಈಗಿನ ಮುಖ್ಯಮಂತ್ರಿ ಜಗನ್ ಅವರು, ಅಮರಾವತಿ ತಮ್ಮ ಆದ್ಯತೆ ಅಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಈ ವರ್ಷದ ಬಜೆಟ್ನಲ್ಲಿ ಯೋಜನೆಗೆ ₹500 ಕೋಟಿ ಮಾತ್ರ ಮೀಸಲು ಇರಿಸಲಾಗಿದೆ. ಈ ಮೂಲಕ ಅಮರಾವತಿಯನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸುವ ಉದ್ದೇಶ ಇಲ್ಲ ಎಂಬ ಸಂದೇಶ ರವಾನಿಸಿದ್ದಾರೆ.