ವಿಚಾರಣೆ ವೇಳೆ ಶ್ರೀಧರ್ ಪೂಜಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಅರ್ಜಿದಾರರು ಕಾನೂನು ಪರಿಪಾಲಕರಾಗಿದ್ದು, ಉನ್ನತ ಹುದ್ದೆಯಲ್ಲಿದ್ದಾರೆ. ಅವರು ಯಾವುದೇ ಅಪರಾಧ ಮಾಡಿಲ್ಲ. ಆದರೆ, ರಾಜಕೀಯ ಉದ್ದೇಶಕ್ಕಾಗಿ ಅವರ ವೃತ್ತಿಪರ ಘನತೆಯನ್ನು ಹಾಳು ಮಾಡಲು ಅವರನ್ನು ಪ್ರಕರಣದಲ್ಲಿ ಆರೋಪಿ ಎಂಬಂತೆ ಬಿಂಬಿಸಲಾಗಿದೆ’ ಎಂದರು.