ರಾಣೆಬೆನ್ನೂರು, ಹಿರೇಕೆರೂರು ಮತ್ತು ಹುಣಸೂರು ಕ್ಷೇತ್ರಗಳಲ್ಲಿ ಮಾಜಿ ಶಾಸಕರಿಗೆ ಅವಕಾಶ ನೀಡಿದ್ದರೆ, ಒಕ್ಕಲಿಗರ ಪ್ರಾಬಲ್ಯ ಇರುವ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಿಂದ ಪಾಲಿಕೆ ಸದಸ್ಯ, ಕುರುಬ ಸಮುದಾಯದ ಎಂ. ಶಿವರಾಜ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳ ಪೈಕಿ ಗೋಕಾಕ, ಕಾಗವಾಡ, ಅಥಣಿ, ಯಶವಂತ
ಪುರ, ಶಿವಾಜಿನಗರ, ಕೆ.ಆರ್.ಪೇಟೆ ಮತ್ತು ವಿಜಯನಗರ (ಹೊಸಪೇಟೆ) ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ.