ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

Published 27 ಏಪ್ರಿಲ್ 2024, 10:49 IST
Last Updated 27 ಏಪ್ರಿಲ್ 2024, 10:49 IST
ಅಕ್ಷರ ಗಾತ್ರ

ಕರ್ನಾಟಕಕ್ಕೆ ₹3, 454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೊಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ. ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಆದರೆ, ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಾಗ್ದಾನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT