ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃತಕ ಬುದ್ಧಿಮತ್ತೆಯ ಕಾಲಘಟ್ಟದಲ್ಲಿ ಮನುಕುಲದ ನಡುವೆ ಕ್ರೌರ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ. ಸ್ಟೀಫನ್ ಹಾಕಿಂಗ್ ಸೇರಿದಂತೆ ಹಲವಾರು ವಿಜ್ಞಾನಿಗಳು ಈ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಇಂಗ್ಲಿಷ್, ಹಿಂದಿ ಭಾಷೆಗಳ ಅಬ್ಬರದಲ್ಲಿ ಸ್ಥಳೀಯ, ಪ್ರಾದೇಶಿಕ ಭಾಷೆಗಳು ಅಪಾಯದಲ್ಲಿವೆ. ಯಾವುದೇ ಸಮಾಜ ಅಥವಾ ಸಮುದಾಯ ತನ್ನ ಭಾಷೆ ಕಳೆದುಕೊಂಡರೆ ತಮ್ಮ ಅಸ್ತಿತ್ವವನ್ನೇ ಕಳೆದುಕೊಂಡಂತಾಗುತ್ತದೆ ಎಂದು ವಿವರಿಸಿದ್ದಾರೆ.