ಪ್ರಜ್ವಲ್ ವಿದೇಶಕ್ಕೆ ಪರಾರಿಯಾಗಿರುವ ಕುರಿತು ಪ್ರಶ್ನಿಸಿದಾಗ, ʼಪ್ರಜ್ವಲ್ ವಿದೇಶಕ್ಕೆ ಹೋಗಿದ್ದರೆ ಅದಕ್ಕೂ ನನಗೂ ಸಂಬಂಧ ಇಲ್ಲ. ಅವರು ತಪ್ಪಿಸಿಕೊಂಡಿದ್ದರೆ ಎಸ್ಐಟಿ ಅಧಿಕಾರಿಗಳು ಪತ್ತೆಹಚ್ಚಿ ಕರೆತರಲಿ. ಅದಕಾಗಿಯೇ ನೇಮಿಸಿರುವ ಅಧಿಕಾರಿಗಳಿದ್ದಾರೆʼ ಎಂದರು.
ಆರೋಪ ಬಿಟ್ಟು ಕೆಲಸ ಮಾಡಲಿ: ಕೇಂದ್ರ ಸರ್ಕಾರ ಸೂಕ್ತ ಪ್ರಮಾಣದಲ್ಲಿ ಬರ ಪರಿಹಾರ ನೀಡಿಲ್ಲ ಎಂಬ ಕಾಂಗ್ರೆಸ್ ಆರೋಪದ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ʼಆರಂಭದಲ್ಲಿ ರಾಜ್ಯ ಸರ್ಕಾರ ₹ 4,000 ಕೋಟಿ ಇನ್ಪುಟ್ ಸಬ್ಸಿಡಿ ಮಾತ್ರ ಕೇಳಿತ್ತು. ಅಷ್ಟು ಮೊತ್ತವನ್ನು ಕೇಂದ್ರ ನೀಡಿದೆ. ಈಗ ಸುಮ್ಮನೆ ಆರೋಪದ ಮಾಡುವುದನ್ನು ಬಿಟ್ಟು ಕೊಟ್ಟ ಹಣವನ್ನು ಮೊದಲು ಖರ್ಚು ಮಾಡಲಿʼ ಎಂದು ಹೇಳಿದರು.