ಪ್ರದರ್ಶನಕ್ಕೆ ಚಾಲನೆ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ಆರ್. ನಿರಾಣಿ ಅವರು, ‘ರಾಜ್ಯವು ಬಹುಅವಕಾಶಗಳನ್ನು ಹೊಂದಿರುವ ರಾಜ್ಯ. ದಕ್ಷಿಣ ಭಾರತದ ದೇಶೀಯ ಮತ್ತು ಅಂತರರಾಷ್ಟ್ರೀಯ ವ್ಯಾಪಾರದ ಕೇಂದ್ರ ಬೆಂಗಳೂರು. ತಂತ್ರಜ್ಞಾನ, ಐ.ಟಿ ಸೇವೆಗಳು, ಸಾಫ್ಟ್ವೇರ್, ಏರೊಸ್ಪೇಸ್, ರಕ್ಷಣೆ, ಎಲೆಕ್ಟ್ರಾನಿಕ್ ಉತ್ಪಾದನಾ ಸೇವೆಗಳು, ಮೊಬೈಲ್ ಹ್ಯಾಂಡ್ಸೆಟ್ಗಳು ಮತ್ತು ಸೆಮಿ ಕಂಡಕ್ಟರ್ ಕ್ಷೇತ್ರದಲ್ಲಿ ರಾಜ್ಯವು ಗಣನೀಯ ಕೊಡುಗೆ ನೀಡುತ್ತಿದೆ. ಮುತ್ತು ಮತ್ತು ಆಭರಣ ವ್ಯವಹಾರ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಪ್ರದರ್ಶನದಲ್ಲಿ ₹50 ಸಾವಿರ ಕೋಟಿ ವಹಿವಾಟು ನಿರೀಕ್ಷೆಯಿದೆ’ ಎಂದು ಹೇಳಿದರು.