ರಾಯಚೂರಿನಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಹಾಗೂ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪಕ್ಷ ತಮ್ಮನ್ನೇ ಅಭ್ಯರ್ಥಿಯನ್ನಾಗಿ ಮಾಡುತ್ತದೆ ಎಂಬ ವಿಶ್ವಾಸದಲ್ಲಿ ಬಿ.ವಿ.ನಾಯಕ ಪ್ರಚಾರವನ್ನೂ ಆರಂಭಿಸಿದ್ದರು. ಆದರೆ, ಅಮರೇಶ್ವರ ನಾಯಕ ಕೈಮೇಲಾಗಿದೆ. ಅವರು ಮಾಜಿ ಸಚಿವ ಬಿ.ಶ್ರೀರಾಮುಲು ಅವರ ಹತ್ತಿರದ ಸಂಬಂಧಿ.