ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ಹಾಗೂ ಜಾನುವಾರು ಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ವಾಪಸ್ ಪಡೆಯುವಂತೆ ಒತ್ತಾಯಿಸಿ ಬಸವ ಕಲ್ಯಾಣದಿಂದ ಬೆಂಗಳೂರುವರೆಗೆ, ಸಾಗರ ತಾಲ್ಲೂಕಿನ ಕಾಗೋಡಿ
ನಿಂದ ಶಿರಾದ ಜುಂಜಪ್ಪನಗುಡ್ಡೆವರೆಗೆ, ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ಜನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನ ಮಹಾಮೈತ್ರಿ ಜಾಥಾ ಸಂಚಾಲಕ ಎಸ್.ಆರ್. ಹಿರೇಮಠ ತಿಳಿಸಿದರು.