ವಿಶ್ವ ತಲೆ ಗಾಯದ ಜಾಗೃತಿ ದಿನದ ಪ್ರಯುಕ್ತ ಸಂಸ್ಥೆಯು ನಗರದಲ್ಲಿ ಸೋಮವಾರ ಜಾಗೃತಿ ದಿನವನ್ನು ಹಮ್ಮಿಕೊಂಡಿದೆ. ‘ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವವರ ಸಂಖ್ಯೆ ಮೃತರ 30 ಪಟ್ಟು ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಗಾಯಗೊಳ್ಳುವವರಲ್ಲಿ ಹೆಚ್ಚಿನವರು ದ್ವಿಚಕ್ರವಾಹನ ಸವಾರರಾಗಿದ್ದಾರೆ. ಬೆಂಗಳೂರಿನಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಸೀಟ್ ಬೆಲ್ಟ್ ಹಾಕದಿರುವುದು, ಅತಿಯಾದ ವೇಗದಲ್ಲಿ ಚಾಲನೆ, ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಕೆ, ಗುಣಮಟ್ಟದ ಹೆಲ್ಮೆಟ್ ಧರಿಸದೆ ಇರುವುದು, ಸರಿಯಾದ ರೀತಿಯಲ್ಲಿ ಹೆಲ್ಮೆಟ್ ಹಾಕಿಕೊಳ್ಳದೆ ಇರುವುದು ಸೇರಿ ವಿವಿಧ ಕಾರಣಗಳಿಂದ ರಸ್ತೆ ಅಪಘಾತಗಳು ಹೆಚ್ಚಳವಾಗುತ್ತಿವೆ’ ಎಂದು ಹೇಳಿದೆ.