ತೀವ್ರ ಕುತೂಹಲ ಕೆರಳಿಸಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊನೆಗೂ ಘೋಷಣೆಯಾಗಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಬದಲಿಗೆ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲಾಗಿದೆ. 24 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದ ಬಿಜೆಪಿ, ಚಿತ್ರದುರ್ಗ ಮೀಸಲು ಕ್ಷೇತ್ರವನ್ನು ಮಾತ್ರ ಬಾಕಿ ಉಳಿಸಿಕೊಂಡಿತ್ತು. ನಾಮಪತ್ರ ಸಲ್ಲಿಕೆಯ ಮುನ್ನಾ ದಿನ ಹುರಿಯಾಳು ಅಖೈರುಗೊಳಿಸಿದೆ. ಭೋವಿ ಸಮುದಾಯದ ಬಿಗಿಪಟ್ಟಿಗೆ ಮಣಿಯದ ಬಿಜೆಪಿ ಹೈಕಮಾಂಡ್, ಎಡಗೈ ಸಮುದಾಯಕ್ಕೆ ಅವಕಾಶ ಮಾಡಿಕೊಟ್ಟಿದೆ.