ಭದ್ರಾವತಿ ಬಿಇಒ ನಾಗೇಂದ್ರಪ್ಪ ನೀಡಿದ ವರದಿ ಆಧರಿಸಿ ಡಿಡಿಪಿಐ ಈ ಕ್ರಮ ಕೈಗೊಂಡಿದ್ದಾರೆ. ಮುಖ್ಯ ಶಿಕ್ಷಕ ಹುದ್ದೆಯ ಪ್ರಭಾರದಲ್ಲಿದ್ದ ಶಂಕರಪ್ಪ ಕಳೆದ 11 ವರ್ಷಗಳಿಂದ ಗುಡ್ಡದ ನೇರಳಕೆರೆ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.
ಪ್ರತ್ಯೇಕ ವಿಡಿಯೊ: ಶಾಲೆಯ ಸಮವಸ್ತ್ರದಲ್ಲಿರುವ ಹುಡುಗ-ಹುಡುಗಿಯರು ಪ್ರತ್ಯೇಕವಾಗಿ ಬ್ರಷ್ ನಲ್ಲಿ ನೆಲ ಉಜ್ಜಿ ಶೌಚಾಲಯ ಸ್ವಚ್ಛಗೊಳಿಸುವ ದೃಶ್ಯಗಳು ವಿಡಿಯೊದಲ್ಲಿವೆ.
ಡಿಎಸ್ಎಸ್ ದೂರು: ವಿಡಿಯೊ ಹರಿದಾಡುತ್ತಿದ್ದಂತೆಯೇ ದಲಿತ ಸಂಘರ್ಷ ಸಮಿತಿ ವತಿಯಿಂದ ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಲಾಯಿತು.
'ಶಾಲೆಯಲ್ಲಿ ಈ ರೀತಿ ಮಕ್ಕಳಿಂದ ಪದೇ ಪದೇ ಶೌಚಾಲಯ ಸ್ವಚ್ಛಗೊಳಿಸಲಾಗುತ್ತಿದೆ. ಸ್ವಚ್ಛಗೊಳಿಸಲು ನಿರಾಕರಿಸುವ ಮಕ್ಕಳ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ. ಹೀಗಾಗಿ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮನವಿ ಸಲ್ಲಿಸಲಾಯಿತು.
ಬಿಇಓ ಭೇಟಿ: ನಂತರ ಭದ್ರಾವತಿ ವಲಯ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಗುಡ್ಡದ ನೇರಳಕೆರೆ ಶಾಲೆಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು.