ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣದಲ್ಲಿ ಶಶಿ ತರೂರ್ಗೆ ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
‘₹ 1 ಲಕ್ಷದ ಮೌಲ್ಯದ ಬಾಂಡ್ ನೀಡಬೇಕು, ಸಾಕ್ಷ್ಯ ನಾಶ ಮಾಡಬಾರದು ಮತ್ತು ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ದೇಶ ಬಿಟ್ಟು ಹೋಗುವಂತಿಲ್ಲ’ ಎಂಬ ಷರತ್ತುಗಳನ್ನು ವಿಧಿಸಿದೆ.
2014ರ ಜನವರಿ 17ರಂದು ಸುನಂದಾ ಪುಷ್ಕರ ಮೃತದೇಹ ದೆಹಲಿಯ ಪಂಚತಾರ ಹೋಟೆಲ್ ಕೊಠಡಿಯೊಂದರಲ್ಲಿ ಪತ್ತೆಯಾಗಿತ್ತು.
ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದ ವಿಶೇಷ ತನಿಖಾ ತಂಡ, ಶಶಿ ತರೂರ್ ಅವರನ್ನು ಬಂಧಿಸಿ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದೆ. ಹೀಗಾಗಿ ಜಮೀನು ಮಂಜೂರು ಮಾಡಬೇಕು ಎಂದು ಶಶಿ ತರೂರ್ ಮನವಿ ಮಾಡಿದ್ದರು.
ತನಿಖೆಗೆ ಎಲ್ಲಾ ಸಾಕ್ಷ್ಯಗಳಿವೆ ಎಂದಿರುವ ನ್ಯಾಯಾಲಯ, ಇದೇ 7ರಂದು ತನಿಖೆಗೆ ಹಾಜರಾಗುವಂತೆ ತಿಳಿಸಿದೆ.